ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಕಾರಣದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.
ಕೆಂಗೇರಿಯಿಂದ ಬೈಯ್ಯಪ್ಪನಹಳ್ಳಿ ಕಡೆಗೆ ಸಾಗುವ ಮೆಟ್ರೋ ಸಂಚಾರ ಬೆಳಗ್ಗೆ 7:30ರ ಸುಮಾರಿಗೆ ತಾಂತ್ರಿಕ ಕಾರಣದಿಂದಾಗಿ ಸ್ಥಗಿತಗೊಂಡಿದೆ. ಜನರು ಕೆಸಲಕ್ಕೆ ತೆರಳುವ ಸಮಯದಲ್ಲೇ ಮೆಟ್ರೋ ಕೆಟ್ಟು ನಿಂತಿದ್ದು, ಟ್ರೈನ್ ಬಾರದೇ, ಸರಿಯಾದ ಸಮಯಕ್ಕೆ ಕಚೇರಿಗೆ ತಲುಪಲು ಸಾಧ್ಯವಾಗದೆ ಪ್ರಯಾಣಿಕರಿಗೆ ತೊಂದರೆಯಾಗಿದೆ.
ತಾಂತ್ರಿಕ ದೋಷ ಸರಿಪಡಿಸುವ ಕೆಲಸ ನಡೆಯುತ್ತಿದ್ದು, ಶೀಘ್ರದಲ್ಲೇ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.