ರಾಜ್ಯ ಬಜೆಟ್ |‌ ‘ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ’ ಕಾರ್ಯಕ್ರಮದನ್ವಯ ಸಂಭ್ರಮದ ಜಾನಪದ ಹಬ್ಬ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಲು ನೂತನ ಪ್ರಯತ್ನವೊಂದನ್ನು ಬೊಮ್ಮಾಯಿ ಸರ್ಕಾರ ಮಾಡುತ್ತಿದೆ.

ಪರಂಪರೆ ಉಳಿಸಿ, ಬೆಳೆಸಲು ಬೆಂಗಳೂರಿನ ಬಂಜಾರ ಸಂಸ್ಕೃತಿ ಮತ್ತು ಅಕಾಡೆಮಿ ಹಾಗೂ ಯಕ್ಷ ರಂಗಾಯಣ ಸ್ಥಾಪಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಕನ್ನಡ ತಾಯಿ ಶ್ರೀ ಭುವನೇಶ್ವರಿಯ ಬೃಹತ್ ಮೂರ್ತಿ ಹಾಗೂ ಥೀಮ್ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇನ್ನು ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಎಂಬ ಕಾರ್ಯಕ್ರಮದಲ್ಲಿ ಪ್ರತಿ ಜಿಲ್ಲೆಯಲ್ಲಿ ಜಾನಪದ ಹಬ್ಬ ಆಯೋಜನೆ ಮಾಡಲಾಗುವುದು. ಇದರಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!