ರಾಜ್ಯದಲ್ಲಿ ಶೀಘ್ರದಲ್ಲೇ ನಮೋ ಭಾರತ್ ರ‍್ಯಾಪಿಡೊ ರೈಲು ಸಂಚಾರ ಆರಂಭ: ಸಚಿವ ಅಶ್ವಿನಿ ವೈಷ್ಣವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಗರಗಳ ನಡುವಿನ ಸಂಪರ್ಕವನ್ನು ಅಭಿವೃದ್ಧಿಪಡಿಸಲು ರೂಪಿಸಲಾಗಿರುವ ನಮೋ ಭಾರತ್ ರ್ಯಾಪಿಡೋ ರೈಲು ಸಂಚಾರ ಶೀಘ್ರದಲ್ಲೇ ಕರ್ನಾಟಕದಲ್ಲೂ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಹೇಳಿದರು.

ನಗರಕ್ಕೆ ಶನಿವಾರ ಭೇಟಿ ನೀಡಿದ ಅಶ್ವಿನಿ ವೈಷ್ಣವ್​​ ಅವರು, ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದವರೆಗೆ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.

ಈ ವೇಳೆ ಕೇಂದ್ರ ಸಚಿವರಿಗೆ, ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಸಂಸದ ಪಿಸಿ ಮೋಹನ್​ ಮತ್ತು ರೈಲ್ವೆ ಅಧಿಕಾರಿಗಳು ಸಾಥ್ ನೀಡಿದ್ದರು.

ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಶ್ವಿನಿ ವೈಷ್ಣವ್ ಅವರು, ನಗರಗಳ ನಡುವಿನ ಸಂಪರ್ಕವನ್ನು ಅಭಿವೃದ್ಧಿಪಡಿಸಲು ಈ ಯೋಜನೆ ರೂಪಿಸಲಾಗಿದೆ. ಇದು ಒಂದು ನಗರದಿಂದ ಇನ್ನೊಂದು ನಗರಕ್ಕೆ ಅತ್ಯಂತ ವೇಗವಾಗಿ ಸಂಪರ್ಕ ಕಲ್ಪಿಸಲಿದೆ. 150ರಿಂದ200 ಕಿ.ಮೀ. ವ್ಯಾಪ್ತಿಯೊಳಗೆ ಈ ರೈಲುಗಳು ಸಂಚರಿಸಲಿವೆ. ಉದ್ಯೋಗ ಹಾಗೂ ಇತರೆ ಕೆಲಸಗಳಿಗಾಗಿ ತುಮಕೂರು, ಮೈಸೂರಿನಿಂದ ಬೆಂಗಳೂರಿಗೆ ಬರುವವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!