ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆಗೆ ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಮೇ 10ರಂದು ಮತದಾರರು ಹೊಸ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಹಕ್ಕು ಚಲಾಯಿಸಲಿದ್ದಾರೆ.
ಪ್ರವಾಸಿಗರೇ ಈ ದಿನದಂದು ನೀವೇನಾದ್ರೂ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಟ್ರಿಪ್ ಹೋಗ್ಬೇಕು ಅಂತ ಪ್ಲ್ಯಾನ್ ಮಾಡಿದ್ದೀರಾ? ಹಾಗಿದ್ದರೆ ಈ ಮಾಹಿತಿಯನ್ನು ತಪ್ಪದೇ ಓದಿ.
ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, ಈ ದಿನ ಪ್ರಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಮೇ 10ರಂದು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಮಾಹಿತಿ ಹೊರಡಿಸಿದೆ.
ಚುನಾವಣಾ ಆಯೋಗದ ನಿರ್ದೇಶನ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರದ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಮೇ 10ರಂದು ಪ್ರವೇಶ ನಿರ್ಬಂಧಿಸಲಾಗಿದೆ.
ಚುನಾವಣಾ ದಿನ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂಬ ಉದ್ದೇಶದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.
ಮೇ 10ರಂದು ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪ್ರಖ್ಯಾತ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧಿಸಿ ಆದೇಶ ಪ್ರಕಟಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಅವರು ಈ ಕುರಿತು ಅಧಿಕೃತವಾಗಿ ಆದೇಶಿಸಿದ್ದಾರೆ.