Thursday, March 30, 2023

Latest Posts

ನಂದಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ ಘಟನೆ: ಓರ್ವ ಕಾರ್ಮಿಕ ಸಾವು

ಹೊಸದಿಗಂತ ವರದಿ ವಿಜಯಪುರ :

ಜಿಲ್ಲೆಯ ಬಬಲೇಶ್ವರ ತಾಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆಯಲ್ಲಿ ಗಾಯಗೊಂಡಿದ್ದ ಐವರ ಪೈಕಿ ಓರ್ವ ಕಾರ್ಮಿಕ ಮೃತಪಟ್ಟಿದ್ದಾನೆ.

ಪಶ್ಚಿಮ ಬಂಗಾಳ ಮೂಲದ ಸಂದೀಪ ಮಂಡಳ (21) ಮೃತ ಕಾರ್ಮಿಕ.

ಇಲ್ಲಿನ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಾಪಿಸಿದ್ದ ನೂತನ ಬಾಯ್ಲರ್ ನ ಪ್ರಾಯೋಗಿಕ ಪರೀಕ್ಷೆ ನಡೆಸುವ ವೇಳೆ ಸ್ಫೋಟಗೊಂಡು, ಐವರು ಕಾರ್ಮಿಕರು ಶನಿವಾರ ಗಂಭೀರ ಗಾಯಗೊಂಡಿದ್ದರು.

ಗಾಯಾಳುಗಳನ್ನು ಚಿಕಿತ್ಸೆಗಾಗಿ ನಗರದ ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂದೀಪ ಮಂಡಳ ಚಿಕಿತ್ಸೆ ಫಲಿಸದೇ ಅಸುನೀಗಿದ್ದು, ಇನ್ನಿಬ್ಬರಾದ ಪರಸನಜೀತ ಮಂಡಳ, ರಾಜಕುಮಾರ ರಾಮ್ ಸ್ಥಿತಿ ಗಂಭೀರವಾಗಿದೆ.

ಇನ್ನಿಬರು ಕಾರ್ಮಿಕರಾದ ಇಮ್ರಾನ್ ಅನ್ಸಾರಿ, ಅಶೊಕಕುಮಾರ ರಾಮ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಬಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!