ಬಳ್ಳಾರಿ ನಗರ ಕ್ಷೇತ್ರದ ಅಭ್ಯರ್ಥಿಯಾಗಿ ನಾರಾ ಭರತ್ ರೆಡ್ಡಿ ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ ಬಳ್ಳಾರಿ:

ತೀವ್ರ ಜಿದ್ದಾಜಿದ್ದಿ ಕಣವಾಗಿ ಮಾರ್ಪಟ್ಟ ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್ ರೆಡ್ಡಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ನಗರದ ಮೊಕಾ ರಸ್ತೆಯ ಕಚೇರಿಯಿಂದ ಮೆರವಣಿಗೆ ಮೂಲಕ ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿ ದೇಗುಲಕ್ಕೆ ತೆರಳಿ ವಿಶೇಷ ಪೂಜೆ, ಅರ್ಚನೆ ಸಲ್ಲಿಸಿದರು.

ಅಲ್ಲಿಂದ ನೆರವಾಗಿ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ಮೂಲಕ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದರು. ನಗರದ ಹಳೆ ಬಸ್‌ನಿಲ್ದಾಣ ರಸ್ತೆ, ಮೊಕಾ ರಸ್ತೆ ಸೇರಿದಂತೆ ಬಹುತೇಕ ರಸ್ತೆಗಳಲ್ಲಿ ಜನಸ್ತೋಮವೇ ನೆರದಿತ್ತು. ಪಕ್ಷದ ಬಾವುಟಗಳು ರಾರಾಜಿಸಿದವು. ನಗರ ಕ್ಷೇತ್ರಕ್ಕೆ ಸುಮಾರು ಜನ ಆಕಾಂಕ್ಷಿಗಳಿದ್ದರು, ಬಹುತೇಕ ಎಲ್ಲರೂ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ, ಜನರನ್ನು ಕೈಬೀಸುತ್ತಾ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಾಬೀತು ಪಡಿಸಿದರು.
|
ಬೃಹತ್ ಶಕ್ತಿ ಪ್ರದರ್ಶನವೇ ನಡೆಯಿತು. ಈ ಸಂದರ್ಭದಲ್ಲಿ ಎಮ್ಮೆಲ್ಸಿ ಅಲ್ಲಂ ವೀರಭದ್ರಪ್ಪ, ಗ್ರಾಮೀಣ ಶಾಸಕ ಬಿ.ನಾಗೇಂದ್ರ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಜೆ.ಎಸ್.ಆಂಜಿನೇಯಲು, ರಾವೂರ್ ಸುನೀಲ್, ಮಹಾನಗರ ಪಾಲಿಕೆ ಮಾಜಿ ಮೇಯರ್ ಎಂ.ರಾಜೇಶ್ವರಿ ಸುಬ್ಬರಾಯಡು, ಬೂಡಾ ಮಾಜಿ ಅದ್ಯಕ್ಷ ಹುಮಾಯೂನ್ ಖಾನ್, ಸೇರಿದಂತೆ ಪಾಲಿಕೆ ಸದಸ್ಯರು, ಪಕ್ಷದ ವಿವಿಧ ಮುಖಂಡರು, ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!