ನಾರಾಯಣಗೌಡ -ಸೋಮಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ಚರ್ಚಿಸಿಲ್ಲ: ಡಿಕೆಶಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಚಿವ ಕೆಸಿ ನಾರಾಯಣಗೌಡ ಅವರ ಸೇರ್ಪಡೆಗೆ ಮಂಡ್ಯ ಮತ್ತು ಕೆಆರ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಹೇಳುವ ಪ್ರಕಾರ ನಾರಾಯಣ ಗೌಡ ಕಾಂಗ್ರೆಸ್ ಸೇರುವ ಬಗ್ಗೆ ತನ್ನೊಂದಿಗೆ ಯಾವತ್ತೂ ಚರ್ಚಿಸಿಲ್ಲ, ಕಾರ್ಯಕರ್ತರಿಗೆ ಏನು ಮಾಹಿತಿ ಸಿಕ್ಕಿದೆಯೋ ತನಗೆ ಗೊತ್ತಿಲ್ಲ ಎಂದು ಶಿವಕುಮಾರ್ ಹೇಳಿದರು.

ಮತ್ತೊಬ್ಬ ಸಚಿವ ವಿ. ಸೋಮಣ್ಣ ಅವರು ಸಹ ಪಕ್ಷ ಸೇರುವ ಬಗ್ಗೆ ತಮ್ಮೊಂದಿಗೆ ಮಾತಾಡಿಲ್ಲ ಎಂದ ಅವರು ಕನಕಪುರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!