ಹೊಸದಿಗಂತ ಡಿಜಿಟಲ್ ಡೆಸ್ಕ್
ಸಾಮಾಜಿಕ ಹರಿಕಾರ, ಬ್ರಹ್ಮಶ್ರೀ ನಾರಾಯಣ ಗುರುಗಳ ಪುಣ್ಯ ಸ್ಮರಣೆಯ ದಿನದಂದು ಕೇರಳದ ವರ್ಕಲದಲ್ಲಿನ ನಾರಾಯಣ ಗುರುಗಳ ಸಮಾಧಿ ಸ್ಥಳಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿದ್ದರು.
ಈ ವೇಳೆ ನಾರಾಯಣ ಗುರುಗಳ ಸಮಾಧಿಗೆ ಗೌರವ ನಮನಗಳನ್ನು ಸಲ್ಲಿಸಿ ಮಾತನಾಡಿದ ಸಚಿವೆ,
ʼನಾರಾಯಣ ಗುರುಗಳು ಒಬ್ಬ ಶ್ರೇಷ್ಠ ಸಮಾಜ ಸುಧಾರಕರಾಗಿದ್ದು, ಸಮಾಜದಲ್ಲಿನ ತಾರತಮ್ಯಗಳನ್ನು ಕಡಿಮೆ ಮಾಡಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟರು. “ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು” ಎಂಬ ಚಿಂತನೆ ಅವರದಾಗಿತ್ತು ಎಂದು ಶೋಭಾ ಕರಂದ್ಲಾಜೆ ಅವರು ತಿಳಿಸಿದರು.
ಕೇರಳ ರಾಜ್ಯದಲ್ಲಿ ಅಸ್ಪೃಶ್ಯತೆಯ ಪಿಡುಗನ್ನು ತೊಡೆದುಹಾಕಲು ಅವರು ವಿಶೇಷ ಶ್ರಮ ವಹಿಸಿದ್ದರು ಎಂದು ಅವರು ನುಡಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ