Thursday, September 11, 2025

ವಾರಾಣಸಿಗೆ ಬಂದ ಮಾರಿಷಸ್ ಪ್ರಧಾನಿಯನ್ನು ಭೇಟಿಯಾದ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾರಿಷಸ್ ಪ್ರಧಾನಿ ಡಾ. ನವೀನಚಂದ್ರ ರಾಮಗೂಲಂ ಇಂದು ವಾರಾಣಸಿಗೆ ಆಗಮಿಸಿದ್ದು, ಪ್ರಧಾನಿ  ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ.

ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ಖನ್ನಾ ಅವರು ಮಾರಿಷಸ್ ಪ್ರಧಾನಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. 

ಅಭಿವೃದ್ಧಿ ಪಾಲುದಾರಿಕೆ ಮತ್ತು ಸಾಮರ್ಥ್ಯ ವೃದ್ಧಿಯ ಮೇಲೆ ನಿರ್ದಿಷ್ಟವಾಗಿ ಗಮನಹರಿಸುವ ಮೂಲಕ ದ್ವಿಪಕ್ಷೀಯ ಸಹಕಾರದ ನಿರ್ಣಾಯಕ ವಿಷಯಗಳ ಕುರಿತು ಮೋದಿ ಮತ್ತು ರಾಮಗೂಲಂ ಚರ್ಚೆ ನಡೆಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಉತ್ತರಾಖಂಡದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಲ್ಲಿ ರೋಡ್ ಶೋ ನಡೆಸಿದರು.

ಇದನ್ನೂ ಓದಿ