ನಾಳೆ ರಾಜ್ಯಕ್ಕೆ ಪ್ರಧಾನಿ: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ, ಕುಂದಾನಗರಿಯಲ್ಲಿ ರೋಡ್‌ ಶೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದ, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 27ಕ್ಕೆ ಕುಂದಾನಗರಿಗೆ ಭೇಟಿ ನೀಡಲಿರುವ ಪ್ರಧಾನಿ ರೊಡ್‌ ಶೋ ನಡೆಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ನಾಳೆ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಅನುದಾನಿತ, ಅನುದಾನ ರಹಿತ ಎಲ್ಲಾ ಕಾಲೇಜುಗಳ ಪರೀಕ್ಷೆ ಮುಂದೂಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ನಾಳೆ ನಡೆಯುವ ಪರೀಕ್ಷೆಯನ್ನ ಮಾರ್ಚ್ 6ರಂದು ನಡೆಸಲು ಆದೇಶಿಸಲಾಗಿದೆ. ಇನ್ನೂ ನಗರದಲ್ಲಿ ರೋಡ್‌ ಶೋ ಇರುವುದರಿಂದ ಮಾರ್ಗ ಬದಲಾವಣೆ ಹಾಘೆಯೇ ಬಸ್ ಸಂಚಾರ ವ್ಯತ್ಯಯವಾಗಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ನಾಳೆ ಮಲೆನಾಡಿಗರು ಕನಸು ನನಸಾಗಲಿದೆ. ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪನವರ ಜನ್ಮದಿನ ಹಿನ್ನೆಲೆ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ಉದ್ಘಾಟಿಲಿದ್ದಾರೆ. ಇದರ ಜೊತೆಗೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಲಿದೆ.

ಬೆಳಗಾವಿಯಲ್ಲಿ ರೋಡ್‌ ಶೋ

ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿ ಬೆಳಗಾವಿಯಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಶಿವಮೊಗ್ಗದಿಂದ ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನಗರದ ಕೆಎಸ್‌ಆರ್‌ಪಿ ಮೈದಾನಕ್ಕೆ ಬರಲಿದ್ದಾರೆ. ಚನ್ನಮ್ಮ ವೃತ್ತದಿಂದ 10 ಕಿಮೀ ರೋಡ್ ಶೋ ನಡೆಸಲಿದ್ದಾರೆ. ಕಾಲೇಜು ಮಾರ್ಗವಾಗಿ ಸಂಭಾಜಿ ವೃತ್ತ, ಕಿರ್ಲೋಸ್ಕರ್ ರಸ್ತೆ, ಕಪಿಲೇಶ್ವರ ದೇವಸ್ಥಾನ ರಸ್ತೆ, ಶಿವಾಜಿ ಗಾರ್ಡನ್, ಓಲ್ಡ್ ಪಿಬಿ ರೋಡ್ ಮಾರ್ಗವಾಗಿ ಮಾಲಿನಿ ಸಿಟಿವರೆಗೂ ರೋಡ್ ಶೋ ಸಾಗಲಿದೆ. ರೋಡ್ ಶೋ ಬಳಿಕ ಮಾಲಿನಿ ಸಿಟಿಯಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಲಿದ್ದಾರೆ.

ಪ್ರಧಾನಿ ವಾಪಸಾಗುವವರೆಗೆ ಈ ರಸ್ತೆಗಳೆಲ್ಲಾ ಬಂದ್‌ ಆಗಲಿವೆ. ಬೆಳಗ್ಗೆ 8ರಿಂದ ಸಂಜೆ 8ರವರೆಗೂ ಈ ನಿಯಮ ಜಾರಿಯಲ್ಲಿರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!