ಹೊಸದಿಗಂತ ಡಿಜಿಟಲ್ ಡೆಸ್ಕ್:
ನರ್ವಾಲ್ನ ಕೈಗಾರಿಕಾ ಪ್ರದೇಶದಲ್ಲಿ ಅವಳಿ ಸ್ಫೋಟಗಳು ಸಂಭವಿಸಿದ ಸ್ಥಳದಲ್ಲಿ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡವು ಭಾನುವಾರ ಜಮ್ಮು ತಲುಪಿದೆ. ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಶೋಧ ಕಾರ್ಯದ ಭಾಗವಾಗಿ ವಾಹನಗಳನ್ನೂ ತಪಾಸಣೆ ನಡೆಸಲಾಗುತ್ತಿದೆ.
ಶನಿವಾರ ಬೆಳಗ್ಗೆ, ಜಮ್ಮುವಿನ ಕೈಗಾರಿಕಾ ಪ್ರದೇಶದಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು, ನರ್ವಾಲ್ ಕನಿಷ್ಠ ಒಂಭತ್ತು ಜನರು ಗಾಯಗೊಂಡಿದ್ದಾರೆ. ಅವರೆಲ್ಲರನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಅಗತ್ಯವಿರುವ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಧಿವಿಜ್ಞಾನ ತಂಡವು ತಮ್ಮ ತನಿಖೆಯ ಭಾಗವಾಗಿ ಜಮ್ಮುವಿನ ನರ್ವಾಲ್ನಿಂದ ಮಾದರಿಗಳನ್ನು ಸಂಗ್ರಹಿಸಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ಇಂದು ಬೆಳಗ್ಗೆ ನರ್ವಾಲ್ ಪ್ರದೇಶದಲ್ಲಿ ನಡೆದ ಸ್ಫೋಟಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಸ್ಫೋಟದ ಬಗ್ಗೆ ಮತ್ತು ತನಿಖೆಯ ಸ್ಥಿತಿಯ ಬಗ್ಗೆ ವಿವರಿಸಿದರು. ತಪ್ಪಿತಸ್ಥರನ್ನು ಗುರುತಿಸಿ ಕ್ರಮ ಕೈಗೊಳ್ಳಲು ತುರ್ತು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಘಟನೆಯಲ್ಲಿ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಎಲ್ಜಿ ಮನೋಜ್ ಸಿನ್ಹಾ ಘೋಷಿಸಿದ್ದಾರೆ. ಆಡಳಿತವು ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆಯನ್ನು ಕೊಡಿಸುತ್ತದೆ ಮತ್ತು ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದರು.