ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಗೋ ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವುದು, ದಂಡ ವಿಧಿಸುವುದು ನ್ಯಾಯಾಲದ ಕೆಲಸವಲ್ಲ. ಇಲ್ಲಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆಯಾ? ಇಂತಹ ಅರ್ಜಿಗಳನ್ನು ಯಾಕೆ ಸಲ್ಲಿಸುತ್ತಿದ್ದೀರಿ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಪಅಭಯ್ ಎಸ್ ಓಕಾ ಅವರಿದ್ದ ಪೀಠ ಅರ್ಜಿದಾರರನ್ನು ಪ್ರಶ್ನಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಗೋಸಂರಕ್ಷಣೆ ಬಹಳ ಮುಖ್ಯವಾದ ವಿಷಯ ಎಂದರು. ಆದರೆ ನ್ಯಾಯಾಲಯ ಮನವಿ ಪುರಸ್ಕರಿಸಲು ಒಪ್ಪದೇ ಇದ್ದುದರಿಂದ ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರು ನಿರ್ಧರಿಸಿದರು.