ರಾಷ್ಟ್ರೀಯ ಹೆದ್ದಾರಿ ರಸ್ತೆ ದುರಸ್ತಿ ಹಿನ್ನೆಲೆ ಕಾರು ಪಲ್ಟಿ: ವಿದ್ಯಾರ್ಥಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಸ್ತೆ ಬದಿಗೆ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ಹೊರವಲಯದ ಮುಮಿಗಟ್ಟಿ ಗ್ರಾಮದ ಬಳಿ ನಡೆದಿದೆ. ಇದರಿಂದ ಕಾರಿನಲ್ಲಿದ್ದ ದೀಪಕ್ (30) ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ರಸ್ತೆ ನವೀಕರಣದ ಕಾರಣ ಮುಮ್ಮಿಗಟ್ಟಿ ರಾಷ್ಟ್ರೀಯ ಹೆದ್ದಾರಿಯನ್ನು ತಿರುವು ಕೊಡಲಾಗಿತ್ತು. ತಿರುವು ಕೊಟ್ಟಿರುವುದು ಕಾಣದ ಹಿನ್ನೆಲೆಯಲ್ಲಿ ಕಾರು ಪಲ್ಟಿಯಾಗಿದೆ. ರಸ್ತೆ ತಿರುವಿನಲ್ಲಿ ಕಾರು ಸರ್ವಿಸ್ ರಸ್ತೆಗೆ ತೆಗೆದುಕೊಳ್ಳಲು ಹೋಗಿ ಪಲ್ಟಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ದೀಪಕ್ ಸಾವನ್ನಪ್ಪಿದ್ದಾನೆ.

ದೀಪಕ್ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿ. ಓದಿದ್ದು ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ. ಕಾರಿನಲ್ಲಿದ್ದ ವಿನಯ ಎಂಬ ಮತ್ತೊಬ್ಬ ಯುವಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡದ ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!