ಹೊಸದಿಗಂತ ವರದಿ ಹುಬ್ಬಳ್ಳಿ:
ನಗರದಲ್ಲಿ ನಡೆಯಲಿರುವ 26 ನೇ ರಾಷ್ಟ್ರೀಯ ಯುವಜನೋತ್ಸವದ ಉದ್ಘಾಟನಾ ಸಮಾರಂಭ ಆಗಮಿಸಲಿರುವ ಪ್ರಧಾನಿ ಮೋದಿಯವರ ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಗೋಕುಲ ರಸ್ತೆಯ ವಿಮಾನ ನಿಲ್ದಾಣ ಎದುರಿಗೆ ವಿದ್ಯಾರ್ಥಿಗಳು ಹಾಗೂ ಬಿಜೆಪಿ ಮಹಿಳಾ ಕಾರ್ಯಕರ್ತರು ರಂಗೋಲಿ ಹಾಕುವ ಮೂಲಕ ರಸ್ತೆಗಳನ್ನು ಶೃಂಗಾರ ಗೊಳಿಸಿದರು. ‘ವೆಲ್ ಕಮ್ ಟು ಹುಬ್ಬಳ್ಳಿ ಮೋದಿ’ ಎಂಬ ಬೃಹತ್ ಅಕ್ಷರದಲ್ಲಿ ಬರೆಯಲಾಗಿದೆ. ಇನ್ನೂ ಭಿನ್ನ ರೀತಿ ಬೃಹತ್ ಆಕಾರದ ರಂಗೋಲಿ ಬಿಡಿಸಿದರು.
ಸೂಕ್ತ ಭದ್ರತೆ: ಸೂಕ್ತ ಭ್ರದ್ರತೆ ಒದಗಿಸುವ ಉದ್ದೇಶದಿಂದ ಪೊಲೀಸರು ಸಕಲ ಸಿದ್ಧತೆ ನಡೆಸಿದ್ದರು. ಇನ್ನೂ ಸಂಚಾರಿ ಪೊಲೀಸ್ ವಾಹನ ಸಂಚಾರ ನಿಯಂತ್ರಿಸುತ್ತಿದ್ದರು. ಗೋಕುಲ ರಸ್ತೆಯ ಮಾರ್ಗದುದ್ದಕ್ಕೂ ಪೊಲೀಸ್ ನಿಯೋಜಿಸಲಾಗಿದೆ. ಇನ್ನೂ ಒಳ ರಸ್ತೆಗಳಿಂದ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬ್ಯಾರಿಕೇಡ್ ಅಳವಡಿಸಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರಧಾನಿ ಮೋದಿಯನ್ನು ನೋಡಲು ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಗಮಿಸಲಿದ್ದಾರೆ.