ಛತ್ತೀಸ್​ಗಢದಲ್ಲಿ ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದ ನಕ್ಸಲರು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಛತ್ತೀಸ್​ಗಢದ ಧೌಡೈ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಕ್ಸಲರು ಇಂದು ಮೊಬೈಲ್​ ಟವರ್​ ಸುಟ್ಟು ಭಸ್ಮ ಮಾಡಿದ್ದಾರೆ.

ಬಿಜಾಪುರದ ಎರಡು ಗ್ರಾಮಗಳಲ್ಲಿ ಅಳವಡಿಸಿದ್ದ ಎರಡು ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ.

ನಾರಾಯಣಪುರ ಪೊಲೀಸ್​ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಮಾತನಾಡಿ, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮೇ 27ರಂದು ನಾರಾಯಣಪುರದ ಛೋಟೆಡೊಂಗರ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಎರಡು ಮಬೈಲ್​ ಟವರ್​ಗಳಿಗೆ ಬೆಂಕಿ ಹಚ್ಚಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!