ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೊಯಮತ್ತೂರು, ತಿರುವಣ್ಣಾಮಲೈ ಮತ್ತು ರಾಮನಾಥಪುರಂನಲ್ಲಿ ಬಿಜೆಪಿ ಜಿಲ್ಲಾ ಕಚೇರಿಗಳನ್ನು ಉದ್ಘಾಟಿಸಿ ಮಾತನಾಡಿದ ಶಾ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಡಿಎಂಕೆಯ ಎಲ್ಲಾ ನಾಯಕರು ಸ್ನಾತಕೋತ್ತರ ಪದವಿ ಪಡೆದಿದ್ದಾರೆ, ಅವರಲ್ಲಿ ಒಬ್ಬರು ಉದ್ಯೋಗಕ್ಕಾಗಿ ಹಣದ ಪ್ರಕರಣದಲ್ಲಿ ಸಿಲುಕಿದ್ದಾರೆ, ಇನ್ನೊಬ್ಬರು ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಮೂರನೆಯವರು ಅಕ್ರಮ ಆಸ್ತಿಗೆ ಸಂಬಂಧಿಸಿದ ಆರೋಪಗಳನ್ನು ಎದುರಿಸುತ್ತಿದ್ದಾರೆ.
ತಮಿಳುನಾಡಿಗೆ ಕೇಂದ್ರದ ಅನುದಾನ ನಿರಾಕರಿಸಲಾಗಿದೆ ಎಂಬ ಸಿಎಂ ಎಂ.ಕೆ.ಸ್ಟಾಲಿನ್ ಆರೋಪವನ್ನು ತಳ್ಳಿಹಾಕಿದ ಶಾ, ಎಂ.ಕೆ.ಸ್ಟಾಲಿನ್ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ, ಮೋದಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ತಮಿಳುನಾಡಿಗೆ 5 ಲಕ್ಷ ಕೋಟಿ ನೀಡಿದೆ. ಯುಪಿಎ ಮತ್ತು ಎನ್ಡಿಎ ಅಡಿಯಲ್ಲಿ ವಿತರಿಸಲಾದ ಹಣವನ್ನು ಹೋಲಿಸಿದಾಗ ಯುಪಿಎ ಆಡಳಿತದಲ್ಲಿ ನಿಜವಾದ ಅನ್ಯಾಯ ಸಂಭವಿಸಿದೆ” ಎಂದು ಹೇಳಿದ್ದಾರೆ.