ಹೊಸದಿಗಂತ ವರದಿ, ಶ್ರೀರಂಗಪಟ್ಟಣ :
ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ಮುಳುಗಿ ಸಾವುನ್ನಪ್ಪಿರುವ ಘಟನೆ ತಾಲೂಕಿನ ಬಲಮುರಿ ಪ್ರವಾಸಿ ತಾಣದಲ್ಲಿ ನಡೆದಿದೆ.
ನಂಜನಗೂಡ ತಾಲ್ಲೂಕಿನ ಸಾಲುಂಡಿ ಗ್ರಾಮದ ಬೀರಪ್ಪ ಎಂಬುವರ ಮಗ ರವಿಕುಮಾರ್ (18) ಮೃತಪಟ್ಟ ಯುವಕ.
ತನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ, ರವಿಕುಮಾರ್ ಈಗಲು ನದಿಗಿಳಿದ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಕೆಆರ್ಎಸ್ ಪೊಲೀಸರು ಹಾಗೂ ಅಗ್ನಿ ಶಾಮಕ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ನದಿಯಿಂದ ಹೊರ ತೆಗೆದು, ಮರಣೋತ್ತರ ಪರಿಕ್ಷೆಗಾಗಿ ಕೆಆರ್ಎಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂದ ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.