ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸಾಲ್ವರ್ ಆಗಿ ಕಾರ್ಯನಿರ್ವಹಿಸಿದ ಇಬ್ಬರು ಎಂಬಿಬಿಎಸ್ (MBBS) ವಿದ್ಯಾರ್ಥಿಗಳನ್ನು ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ .
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಸಾಲ್ವರ್ ಗಳನ್ನು ಭರತ್ಪುರ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರ್ ಮಂಗಳಂ ಬಿಷ್ಣೋಯ್ ಮತ್ತು ದೀಪೇಂದರ್ ಕುಮಾರ್ ಎಂದು ಗುರುತಿಸಲಾಗಿದೆ.
ಪರೀಕ್ಷೆಯ ದಿನದಂದು ಹಜಾರಿಬಾಗ್ನಲ್ಲಿ ಅವರ ಉಪಸ್ಥಿತಿಯನ್ನು ತಾಂತ್ರಿಕ ಕಣ್ಗಾವಲು ದೃಢಪಡಿಸಿದೆ. ಆರೋಪಿ ಮಾಸ್ಟರ್ ಮೈಂಡ್ ಬಿ.ಟೆಕ್ ಪದವೀಧರ ಎಂದು ಹೇಳಿದೆ.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಸುಪ್ರೀಂಕೋರ್ಟ್ ಆದೇಶದ ನಂತರ NEET-UG ಗಾಗಿ ಕೇಂದ್ರ ಮತ್ತು ನಗರವಾರು ಫಲಿತಾಂಶಗಳನ್ನು ಪ್ರಕಟಿಸಿದ ಗಂಟೆಗಳ ನಂತರ ಇವರ ಬಂಧನದ ಸುದ್ದಿಯಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳ ಕುರಿತು ಸುಪ್ರೀಂಕೋರ್ಟ್ನಲ್ಲಿ ಹಲವು ಅರ್ಜಿಗಳ ವಿಚಾರಣೆ ನಡೆಯುತ್ತಿದೆ.