August 26, 2026
Wednesday, August 26, 2026
spot_img

ನೀಟ್ ಪರೀಕ್ಷಾ ಅಕ್ರಮ: ‘ಹಕ್ಕುಗಳಿಗಾಗಿ ಹೋರಾಡಿ, ಆದರೆ ವಿವೇಚನೆ ಕಳೆದುಕೊಳ್ಳಬೇಡಿ’: ರವಿಶಂಕರ್ ಗುರೂಜಿ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿರುವ ನೀಟ್-ಯುಜಿ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿರುವ ಆಕ್ರೋಶದ ಕುರಿತು ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ್ ಗುರೂಜಿ ಪ್ರತಿಕ್ರಿಯಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿರುವುದು ಸಮಂಜಸವಾಗಿದ್ದರೂ, ಆವೇಶದ ನಡುವೆ ವಿವೇಚನೆ ಮತ್ತು ಸಮಾಧಾನವನ್ನು ಕಳೆದುಕೊಳ್ಳಬಾರದು ಎಂದು ಅವರು ಕಿವಿಮಾತು ಹೇಳಿದ್ದಾರೆ.

ಅಸಾಮಾಜಿಕ ಶಕ್ತಿಗಳ ದುರುಪಯೋಗದ ಎಚ್ಚರಿಕೆ

ಸದ್ಯ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಸನ್ನಿವೇಶವನ್ನು ಅಸಾಮಾಜಿಕ ಹಾಗೂ ದೇಶವಿರೋಧಿ ಶಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರು ಅತ್ಯಂತ ಜಾಗರೂಕರಾಗಿರಬೇಕು ಎಂದು ಗುರೂಜಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ:

ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ

ಯೂತ್ ಐಕಾನ್ ಹಾಗೂ ಆಧ್ಯಾತ್ಮಿಕ ಗುರುಗಳಾದ ಶ್ರೀ ರವಿಶಂಕರ್ ಗುರೂಜಿ, ಯಾವುದೇ ಜಟಿಲ ಸಮಸ್ಯೆಯಾಗಿದ್ದರೂ ಸರ್ಕಾರದೊಂದಿಗೆ ಶಾಂತಿಯುತ ಮಾತುಕತೆಯ ಮೂಲಕವೇ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಆದ್ದರಿಂದ ಯುವಜನತೆ ಆಕ್ರೋಶದ ರಭಸದಲ್ಲಿ ಸಮಾಜದಲ್ಲಿ ಅಶಾಂತಿಗೆ ಆಸ್ಪದ ನೀಡದೆ, ಸಂಯಮದಿಂದ ಶಾಂತಿಯುತ ಮಾರ್ಗವನ್ನು ಅನುಸರಿಸಬೇಕು ಎಂದು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !