ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ 19 ವರ್ಷದ ನೇಹಾ ಕೊಲೆ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿ ತೌಫಿಕ್ನನ್ನು ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ತಾಂಡಾದಿಂದ ಬಂಧಿಸಿದ್ದಾರೆ.
ಜೂನ್ 23ರಂದು ದೆಹಲಿಯ ಜ್ಯೋತಿ ನಗರದಲ್ಲಿ ನಡೆದ ಘಟನೆಯಲ್ಲಿ, ತೌಫಿಕ್ ಬುರ್ಖಾ ಧರಿಸಿ ನೇಹಾಳ ಮನೆಗೆ ಬಂದು, ಐದನೇ ಮಹಡಿಯಿಂದ ಅವಳನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಚಿಕಿತ್ಸೆಯ ಸಮಯದಲ್ಲಿ ನೇಹಾ ಮೃತಪಟ್ಟಿದ್ದಾಳೆ.
ಪೊಲೀಸ್ ಮೂಲಗಳ ಪ್ರಕಾರ, ನೇಹಾ ಮತ್ತು ತೌಫಿಕ್ ಪ್ರೇಮ ಸಂಬಂಧದಲ್ಲಿದ್ದರು. ಜೂನ್ 23ರ ಬೆಳಿಗ್ಗೆ ತೌಫಿಕ್ ಬೇರೆ ಹುಡುಗಿಯನ್ನು ಮದುವೆಯಾಗುತ್ತಿರುವ ವಿಷಯ ತಿಳಿದು ಇಬ್ಬರ ನಡುವೆ ಜಗಳವಾಗಿತ್ತು. ಆ ದಿನವೇ ತೌಫಿಕ್ ಬುರ್ಖಾ ಧರಿಸಿ ನೇಹಾಳ ಮನೆಗೆ ತಲುಪಿ, ಸ್ನೇಹಿತನಂತೆ ನಟಿಸಿ ಐದನೇ ಮಹಡಿಗೆ ಕರೆದೊಯ್ದಿದ್ದ ಅರೋಪಿ, ಮಹಡಿ ಮೇಲೆ ಇಬ್ಬರ ನಡುವೆ ಜಗಳ ನಡೆದಿದೆ. ಯಾರಿಗೂ ಗುರುತು ಸಿಗದಂತೆ ಮೊದಲ ಪ್ಲಾನ್ ಮಾಡಿಕೊಂಡು ಬಂದಿದ್ದ ಆರೋಪಿ ಐದನೇ ಮಹಡಿಯಿಂದ ನೇಹಳ್ಳನ್ನು ತಳ್ಳಿದ್ದಾನೆ.
ಆರಂಭದಲ್ಲಿ ಕೊಲೆ ಯತ್ನದಡಿ ಪ್ರಕರಣ ದಾಖಲಾಗಿತ್ತು. ಆದರೆ, ನೇಹಾಳ ಸಾವಿನ ನಂತರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 103 (ಕೊಲೆ) ಅಡಿಯಲ್ಲಿ ಆರೋಪ ಸೇರಿಸಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಿ, ರಾಂಪುರದಲ್ಲಿ ತೌಫಿಕ್ನನ್ನು ಬಂಧಿಸಿದ್ದಾರೆ.