ಕಾಸರಗೋಡಲ್ಲಿ ನೆರೆ ಭೀತಿ: ವೃದ್ಧರಿಬ್ಬರನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳೆ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ತಗ್ಗು ಪ್ರದೇಶಗಳು ಜಲಪ್ರವಾಹ ಭೀತಿ ಎದುರಿಸುತ್ತಿವೆ.
ಚೆಂಗಳ ಪಂಚಾಯತ್ ವ್ಯಾಪ್ತಿಯ ನೆಲ್ಲಿಕಟ್ಟೆ ಎಂಬಲ್ಲಿ ನೆರೆ ನೀರಿಗೆ ಸಿಲುಕಿದ್ದ ಶ್ರೀಮತಿ, ಸೌಜಿತ್ ಎಂಬ ವೃದ್ಧರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ.
ಈ ಇಬ್ಬರು ಅಪಾಯಕ್ಕೆ ಸಿಲುಕಿದ್ದ ಮಾಹಿತಿ ಪಡೆದ ಕಾಸರಗೋಡು ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಸುರಕ್ಷಿತವಾಗಿ ಸ್ಥಳಾಂತರಿಸಲು ಯಶಸ್ವಿಯಾಯಿತು. ಜಿಲ್ಲೆಯ ಉಳಿದೆಡೆಗಳಲ್ಲಿಯೂ ಈಗ ಪ್ರವಾಹ ಭೀತಿ ಎದುರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!