ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ಹೊಸ ಬದಲಾವಣೆ, ಬೇಸರ ವ್ಯಕ್ತಪಡಿಸಿದ ಡಿಕೆಶಿ​

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಪಿಸಿಸಿ 2024 ರ ಲೋಕಸಭೆ ಚುನಾವಣೆಗೆ ಹೊಸ ಪದಾಧಿಕಾರಿಗಳನ್ನು ನೇಮಿಸಿತ್ತು. ಆದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿರುವ ಪಟ್ಟಿಯಲ್ಲಿ ಬದಲಾವಣೆಗಳಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಎಐಸಿಸಿ ಇದೀಗ ಮತ್ತೆ ಕೆಲ ಬದಲಾವಣೆ ಮಾಡಿ ಹೊಸ ನಾಯಕರ ಹೆಸರನ್ನು ಸೇರಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಸಂಖ್ಯೆಯನ್ನು 138ರಿಂದ 140ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ರಾಜಾಜಿನಗರದ ರಘುವೀರ್ ಗೌಡ ಅವರಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ನೀಡಲಾಗಿತ್ತು ಆದರೆ ಇದೀಗ ಈ ಸ್ಥಾನವನ್ನು ಭವ್ಯಾ ನರಸಿಂಹಮೂರ್ತಿ ಅವರಿಗೆ ನೀಡಲಾಗಿದೆ. ಬಿ.ಆರ್.ನಾಯ್ಡು ವಕುಮಾರ್, ಸಂಜಯ್ ಜಾಗಿದಾರ್, ಸುಶುತ್ ಗೌಡ, ರಾಬರ್ಟ್ ದೊಡ್ಡಪುರ, ಅನಿಲ್ ಕುಮಾರ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!