ಹೊಸದಿಗಂತ ವರದಿ ಕಾರವಾರ:
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ಕಾಂಗ್ರೆಸ್ ಧುರೀಣ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆಯವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಹಿಂದಿನ ಸಿದ್ದರಾಮಯ್ಯ ಅವರ ಆಡಳಿತ ಅವಧಿಯಲ್ಲೂ ದೇಶಪಾಂಡೆಯವರು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ನಂತರ ಮತ್ತು ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆಯವರು ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತಾದರೂ ದೇಶಪಾಂಡೆ ಸೇರಿದಂತೆ ಜಿಲ್ಲೆಯ ಯಾವ ಶಾಸಕರಿಗೂ ಸಚಿವ ಸಂಪುಟದಲ್ಲಿ ಸ್ಥಾನ ದೊರಕಿರಲಿಲ್ಲ.
ಇದೀಗ ಆರ್.ವಿ.ದೇಶಪಾಂಡೆಯವರಿಗೆ ಸಚಿವ ದರ್ಜೆಯ ಸ್ಥಾನಮಾನಗಳೊಂದಿಗೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಪಾಲರ ಅನುಮೋದನೆಯೊಂದಿಗೆ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.



