August 24, 2026
Monday, August 24, 2026
spot_img

ಕೆಪಿಎಸ್‌ಸಿ ನೇಮಕಾತಿ ಅಕ್ರಮ ವಿವಾದಕ್ಕೆ ಹೊಸ ಟ್ವಿಸ್ಟ್: ಪ್ರಕರಣ CID ಕೈಗೊಪ್ಪಿಸಲು ಸರ್ಕಾರದ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ.

ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಸಿಐಡಿಗೆ ಹಸ್ತಾಂತರಿಸಲಾಗಿದೆ.

ಅಕ್ರಮಕ್ಕೆ ಕಠಿಣ ಕ್ರಮದ ಎಚ್ಚರಿಕೆ

ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ಅಥವಾ ಅಕ್ರಮ ಸಾಬೀತಾದರೆ, ಹುದ್ದೆ ನೋಡದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:

ಎಫ್‌ಐಆರ್‌ನಲ್ಲಿ ಹಲವು ಹೆಸರುಗಳು

ಪ್ರಕರಣದಲ್ಲಿ ಅಮಾನತುಗೊಂಡ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್, ಕೆಲ ಅಧಿಕಾರಿಗಳು ಹಾಗೂ 29 ಅಭ್ಯರ್ಥಿಗಳ ಹೆಸರು ಉಲ್ಲೇಖಿಸಲಾಗಿದೆ.

ಆಂತರಿಕ ತನಿಖೆಯೂ ಮುಂದುವರಿಕೆ

ಆರೋಪಗಳ ಹಿನ್ನೆಲೆ ಅಂತಿಮ ಆಯ್ಕೆ ಪಟ್ಟಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದು, ಕೆಪಿಎಸ್‌ಸಿ ಆಂತರಿಕ ತನಿಖೆಯನ್ನೂ ಆರಂಭಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !