ಹೊಸದಿಗಂತ ವರದಿ , ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ, ವಾಣಿಜ್ಯ ಸಮುಚ್ಛಯ ಬಂದ್ ಸಹಿತ ವಿವಿಧ ನಿರ್ಬಂಧಗಳನ್ನು ಆ.4ರ ಗುರುವಾರದವರೆಗೆ ವಿಸ್ತರಿಸಲಾಗಿದೆ.
ಪೊಲೀಸ್ ಇಲಾಖೆಯ ಕೋರಿಕೆಯಂತೆ ಎಲ್ಲ ನಿರ್ಬಂಧಗಳನ್ನು ಜಿಲ್ಲೆಯಾದ್ಯಂತ ಮುಂದಿನ ಎರಡು ದಿನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.