ನಡ್ಡಾ ಭೇಟಿಯ ಬಳಿಕ ಮುಂದಿನ ನಿರ್ಧಾರ: ಜಗದೀಶ್ ಶೆಟ್ಟರ್

ಹೊಸದಿಗಂತ ವರದಿ ಹುಬ್ಬಳ್ಳಿ:

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ದೊರೆಯದ ಕಾರಣ ಬುಧವಾರ ಬೆಳಿಗ್ಗೆ ೭.೩೦ರ ವಿಮಾನದ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರೆ.

ಮಂಗಳವಾರ ಟಿಕೆಟ್ ದೊರೆಯದ ಕಾರಣ ಅಸಮಾಧನ ಗೊಂಡಿದ್ದರು. ಹೊಸಬರಿಗೆ ಅವಕಾಶ ನೀಡುತ್ತೇನೆ ಎಂದು‌ 2-3 ತಿಂಗಳ ಮೊದಲೆ ಹೇಳಬೇಕಿತ್ತು. ನಾಮಪತ್ರ ಸಲ್ಲಿಸಲು ಎರಡುಮೂರು ದಿನ ಇದ್ದಾಗ ಹೇಳಿದರೇ ಏನು‌ ಮಾಡುವುದು. ಆದರಿಂದ ಈ ಬಾರಿ ಚುನಾವಣೆ ಸ್ಪರ್ಧಿಸುತ್ತೇನೆ ವರಿಷ್ಠರು ಟಿಕೆಟ್ ನೀಡುವ ಭರವಸೆ ಇದೆ ಎಂದು ಹೇಳಿದ್ದರು.

ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾದ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ಸ್ವತಃ ರಾಷ್ಟ್ರೀಯ ಅಧ್ಯಕ್ಷರು ಕರೆ ಮಾಡಿ ಭೇಟಿಯಾಗಲು ಸೂಚಿಸಿದ್ದಾರೆ. ಆದರಿಂದ ದೆಹಲಿಗೆ ಹೋಗಿ ಅವರೊಂದಿಗೆ ಮುಕ್ತವಾಗಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!