ಹೊಸದಿಗಂತ ಡಿಜಿಟಲ್ ಡೆಸ್ಕ್
ಭಯೋತ್ಪಾದಕ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಗ್ಯಾಂಗ್ ಸ್ಟರ್ ಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಮರ ಸಾರಿದೆ. ಮಂಗಳವಾರ ಉತ್ತರ ಭಾರತದಾದ್ಯಂತ ಹಲವಾರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆದಿದೆ.
ಭಾರತ ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು, ದರೋಡೆಕೋರರು, ಮಾದಕವಸ್ತು ಕಳ್ಳಸಾಗಣೆದಾರರು ಮತ್ತು ಕಳ್ಳಸಾಗಣೆದಾರರ ನಡುವಿನ ಸಂಬಂಧವನ್ನು ತಡೆಯುವ ಉದ್ದೇಶದಿಂದ ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್ಸಿಆರ್) ನಲ್ಲಿ ದಾಳಿಗಳನ್ನು ನಡೆಸಲಾಗಿದೆ.
ಈ ಹಿಂದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಭಾರತದಾದ್ಯಂತ 60 ಸ್ಥಳಗಳಲ್ಲಿ ದಾಳಿ ನಡೆಸಿತ್ತು.
ಭಯೋತ್ಪಾದನೆ ಮತ್ತು ಅಪರಾಧ ಚಟುವಟಿಕೆಗಳನ್ನು ಮುನ್ನಡೆಸುತ್ತಿರುವ ಹಲವಾರು ಗ್ಯಾಂಗ್ ನಾಯಕರು ಮತ್ತು ಅವರ ಸಹಚರರನ್ನು ಗುರುತಿಸಿ ಪ್ರಕರಣ ದಾಖಲಿಸಲಾಗಿದೆ. ಈ ದರೋಡೆಕೋರರು ಕೇವಲ ಭಾರತದಿಂದ ಮಾತ್ರವಲ್ಲದೆ ವಿದೇಶಗಳಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
“ಅನೇಕ ಗ್ಯಾಂಗ್ ನಾಯಕರು ಮತ್ತು ಸದಸ್ಯರು ಭಾರತದಿಂದ ಪಲಾಯನ ಮಾಡಿದ್ದಾರೆ ಮತ್ತು ಈಗ ಪಾಕಿಸ್ತಾನ, ಕೆನಡಾ, ಮಲೇಷ್ಯಾ, ಆಸ್ಟ್ರೇಲಿಯಾ ಸೇರಿದಂತೆ ವಿದೇಶಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿ ಅವರ ಸಹಚರರರು ಅವರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಎನ್ಐಎ ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ