ನಸುಕಿನ ಜಾವ ಮಲೆನಾಡ ಹೆಬ್ಬಾಗಿಲು ಶಿರಸಿಯಲ್ಲಿ ಎನ್‌ಐಎ ದಾಳಿ: ಎಸ್​​ಡಿಪಿಐ ಮುಖಂಡ ಅಜೀಜ್ ಅಬ್ದುಲ್ ವಶಕ್ಕೆ

ಹೊಸದಿಗಂತ ವರದಿ ಶಿರಸಿ :

ರಾಜ್ಯದ ಹಲವು ಕಡೆ ದಾಳಿ ನಡೆದಂತೆ ಇಲ್ಲಿನ ಟಿಪ್ಪು ನಗರದಲ್ಲಿದ್ದ ಎಸ್ಡಿಪಿಐ ಕಾರ್ಯಕರ್ತನೋರ್ವನ್ನು ಬಂಧಿಸಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದು, ಎಸ್​​ಡಿಪಿಐ ಮುಖಂಡ ಅಜೀಜ್ ಅಬ್ದುಲ್ ಶುಕುರ್ ಹೊನ್ನಾವರ್ (45) ಎಂಬಾತನನ್ನು ಬಂಧಿಸಲಾಗಿದೆ.

ಬೆಳಗ್ಗೆ ನಸುಕಿನಲ್ಲಿ 3.30ರಿಂದಲೇ ಅಬ್ದುಲ್ ಮನೆಯ ಬಳಿ ಪೊಲೀಸರ ದಂಡೇ ನೆರೆದಿತ್ತು. ಸುಮಾರು 6 ಗಂಟೆಯ ವೇಳೆಗೆ ಈತನ ಮನೆಗೆ ಅಧಿಕಾರಿಗಳು ತೆರಳಿದ್ದು ಒಂದು ಲ್ಯಾಪ್ ಟಾಪ್, 2 ಮೊಬೈಲ್, ಪುಸ್ತಕಗಳು ಹಾಗೂ ಒಂದು ಸಿಡಿಯನ್ನು ಜಪ್ತಿ ಮಾಡಿದ್ದಾರೆ ಎಂಬ ಮಾಹಿತಿ ದೊರೆತಿದೆ.‌
ಅಬ್ದುಲ್ ಜೊತೆ ಅಲ್ಲೇ ಸಮೀಪದಲ್ಲಿದ್ದ ಆತನ ತಮ್ಮನ ಮನೆಯ ಮೇಲೂ ಶೋಧ ನಡೆದಿದೆ. ಆದರೆ ಆತ ಮನೆಯಲ್ಲಿ ಇಲ್ಲದ ಕಾರಣ ಅಬ್ದುಲ್ ಬಂಧನ ಮಾತ್ರ ಆಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!