ಹರ್ಷ ಹತ್ಯೆ ತನಿಖೆಗೆ ಎನ್‌ಐಎ: ಸಿಎಂಗೆ ಸಂಸದೆ ಶೋಭಾ ಆಗ್ರಹ

ಹೊಸದಿಗಂತ ಆನ್‌ಲೈನ್ ಡೆಸ್ಕ್

ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಹರ್ಷ ಹತ್ಯೆಯ ವಿಸ್ತೃತ ತನಿಖೆಯಾಗಬೇಕು, ಸೂಕ್ತ ರೀತಿಯಲ್ಲಿ ತನಿಖೆ ನಡೆದು, ಆರೋಪಿಗಳಿಗೆ ಶಿಕ್ಷೆ ಆಗಬೇಕು. ಈ ದುಷ್ಕೃತ್ಯದ ಹಿಂದಿರುವ  ಕಾಣದ ಕೈಗಳನ್ನು ಪತ್ತೆಹಚ್ಚಲು ಎನ್‌ಐಎ ತನಿಖೆ ಸೂಕ್ತ ಎಂದು ಅವರು ಅಭಿಪ್ರಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!