BIG NEWS | ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ಹೊಸದಿಗಂತ ವರದಿ, ಮಡಿಕೇರಿ:

ರಾಷ್ಟ್ರೀಯ ಹೆದ್ದಾರಿ 275ರ ಮದೆನಾಡುವಿನ (ಕರ್ತೋಜಿ)ಕಿ.ಮೀ.90.050 ರಲ್ಲಿ ಗುಡ್ಡದ ಮೇಲ್ಭಾಗದಲ್ಲಿ ಬಿರುಕು ಕಂಡುಬಂದಿದ್ದು ಈ ಭಾಗದಲ್ಲಿ ಅತಿಯಾದ ಮಳೆಯಿರುವುದರಿಂದ ಯಾವುದೇ ಸಮಯದಲ್ಲಿ ಗುಡ್ಡ ಕುಸಿಯುವ ಸಂಭವವಿರುತ್ತದೆ.

ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸಂಚಾಲಕರಿಗೆ ಅಪಾಯ ಮತ್ತು ಅನಾಹುತ ಉಂಟಾಗುವ ಸಾಧ್ಯತೆಯಿರುವುದರಿಂದ ಬುಧವಾರ ರಾತ್ರಿ 8.30 ಗಂಟೆಯಿಂದ ಗುರುವಾರ ಬೆಳಗ್ಗೆ 6.30ಗಂಟೆಯವರೆಗೆ ಹಾಗೂ ಗುರುವಾರ ರಾತ್ರಿ 8.30ರಿಂದ ಶುಕ್ರವಾರ ಬೆಳಗ್ಗೆ 6.30ರವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!