ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ಹೊಸದಿಗಂತ ವರದಿ ಮಡಿಕೇರಿ:
ರಾಷ್ಟ್ರೀಯ ಹೆದ್ದಾರಿ 275ರ ಮದೆನಾಡುವಿನ (ಕರ್ತೋಜಿ)ಕಿ.ಮೀ.90.050 ರಲ್ಲಿ ಗುಡ್ಡದ ಮೇಲ್ಭಾಗದಲ್ಲಿ ಬಿರುಕು ಕಂಡುಬಂದಿದ್ದು ಈ ಭಾಗದಲ್ಲಿ ಅತಿಯಾದ ಮಳೆಯಿರುವುದರಿಂದ ಯಾವುದೇ ಸಮಯದಲ್ಲಿ ಗುಡ್ಡ ಕುಸಿಯುವ ಸಂಭವವಿರುತ್ತದೆ.
ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸಂಚಾಲಕರಿಗೆ ಅಪಾಯ ಮತ್ತು ಅನಾಹುತ ಉಂಟಾಗುವ ಸಾಧ್ಯತೆಯಿರುವುದರಿಂದ ಮಂಗಳವಾರ ರಾತ್ರಿ 9 ಗಂಟೆಯಿಂದ ಬುಧವಾರ ಬೆಳಗ್ಗೆ 6ಗಂಟೆಯವರೆಗೆ ರಾತ್ರಿ ಓಡಾಡುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!