ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ನಿಖಿಲ್ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮೈತ್ರಿ ಬಗ್ಗೆ ಚರ್ಚೆ ನಡೆಸಿದ್ದಾರೆ.
ಆದಿತ್ಯನಾಥ್ ಅವರಿಂದ ಯುಪಿ ರಾಜಕಾರಣದ ಬೆಳಗವಣಿಗೆಗಳ ಬಗ್ಗೆ ನಿಖಿಲ್ ತಿಳಿದುಕೊಂಡಿದ್ದು, ರಾಮ ಲಕ್ಷ್ಮಣ ಸೀತೆಯ ವಿಗ್ರಹವನ್ನು ಗಿಫ್ಟ್ ನೀಡಿ ಬಂದಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಯೋಗಿ ಆದಿತ್ಯನಾಥ್ ಜಿ ಅವರ ಜೊತೆ ಚರ್ಚೆ ಮಾಡಿದೆ, ಇದು ಉತ್ತಮ ಬೆಳವಣಿಗೆ, ನನ್ನನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡರು ಎಂದು ನಿಖಿಲ್ ಹೇಳಿದ್ದಾರೆ.