ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಘಾಳದ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದ್ದು, ಬೆಂಕಿ ಆರಂಭವಾಗಿದ್ದು ಹೇಗೆ ಎನ್ನುವ ಬಗ್ಗೆ ಅಪರಾಧ ತನಿಖಾ ಇಲಾಖೆ ತನಿಖೆ ಆರಂಭಿಸಿದೆ.
ಈವರೆಗೂ ಒಂಬತ್ತು ಮೃತದೇಹಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದ್ದಕ್ಕಿದ್ದಂತೆಯೇ ಭಾರೀ ಶಬ್ದ ಕೇಳಿದ್ದು, ಕಾರ್ಖಾನೆಯ ಮೇಲ್ಛಾವಣಿ ಹಾರಿ ಹೋಗಿದೆ, ಎಷ್ಟೋ ಮೃತದೇಹಗಳು ರಸ್ತೆಯಲ್ಲಿ ಛಿದ್ರವಾಗಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಸ್ಫೋಟದ ನಂತರ ಬೆಂಕಿ ಕಾಣಿಸಿದ್ದು, ಅಗ್ನಿಶಾಮಕ ದಳ ಅಗ್ನಿ ನಂದಿಸಿದೆ.