ಬಿಹಾರದ ಮುಂದಿನ ಸಿಎಂ ಅಭ್ಯರ್ಥಿ ನಿತೀಶ್ ಕುಮಾರ್: ಕೇಂದ್ರ ಸಚಿವ ನಿತ್ಯಾನಂದ ರೈ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ನಿತ್ಯಾನಂದ ರೈ ಗುರುವಾರ ಹೇಳಿದ್ದಾರೆ.

ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ಚುನಾವಣೆಗೂ ಮುನ್ನ ಎನ್‌ಡಿಎ ಸಿಎಂ ಅಭ್ಯರ್ಥಿ ಕುರಿತು ನಡೆಯುತ್ತಿರುವ ಊಹಾಪೋಹಗಳ ಮಧ್ಯೆ ರೈ ಅವರ ಹೇಳಿಕೆಯು ರಾಜಕೀಯ ಮಹತ್ವವನ್ನು ಪಡೆದಿದೆ.

ಬಿಜೆಪಿಯ ವರಿಷ್ಠರು ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲು ಹಿಂಜರಿಯುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತಿತ್ತು. ಈ ಊಹಾಪೋಹಗಳಿಗೆ ನಿತ್ಯಾನಂದ ರೈ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!