ಈ ಬಾರಿ SSLC ವಿದ್ಯಾರ್ಥಿಗಳಿಗೆ 10% ಗ್ರೇಸ್ ಅಂಕ ಇಲ್ಲ: ಸಚಿವ ಮಧು ಬಂಗಾರಪ್ಪ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಳೆದ ವರ್ಷ SSLC ಎಕ್ಸಾಂನಲ್ಲಿ 10% ಹೆಚ್ಚುವರಿ ಗ್ರೇಸ್ ಮಾರ್ಕ್ಸ್ ಕೊಟ್ಟು ವಿವಾದಕ್ಕೀಡಾಗಿದ್ದ ಶಿಕ್ಷಣ ಇಲಾಖೆ, ಈ ವರ್ಷ ಮಾರ್ಕ್ಸ್ ರದ್ದು ಮಾಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶೀಘ್ರವೇ ಬರಲಿದೆ. ಕಳೆದ ವರ್ಷ ವೆಬ್‌ಕಾಸ್ಟ್ ಮಾಡುವುದರಿಂದ ಕಡಿಮೆ ಫಲಿತಾಂಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಫಲಿತಾಂಶ ವೃದ್ಧಿಗೆ ಏನು ಮಾಡಬೇಕು ಅಂತ ಚರ್ಚೆ ಮಾಡಿದ್ವಿ. ಈ ನಿಟ್ಟಿನಲ್ಲಿ ಇಲಾಖೆ ಕೆಲಸ ಮಾಡಿದೆ. ಪ್ರತಿ ಜಿಲ್ಲೆಯ ಸಿಇಒಗಳು ಈ ಬಾರಿ ನಮಗೆ ಹೆಚ್ಚು ಸಹಕಾರ ಕೊಟ್ಟಿದ್ದಾರೆ. ಮಕ್ಕಳಿಗೆ ಪರೀಕ್ಷಾ ಸಿದ್ಧತೆಗೆ ನಾವು ಮಾರ್ಗೋಪಾಯಗಳನ್ನ ಸಿದ್ಧ ಮಾಡಿದ್ದೇವೆ ಎಂದು ತಿಳಿಸಿದರು.

3 ಎಕ್ಸಾಂ ಪದ್ಧತಿ ಈಗ ಮಕ್ಕಳಿಗೆ ಅರ್ಥವಾಗಿದೆ. ಒಂದು ವೇಳೆ ಫೇಲ್ ಆದರೆ ಮತ್ತೆ ಶಾಲೆಗೆ ಸೇರುವ ವ್ಯವಸ್ಥೆಯೂ ಕೂಡಾ ಈಗ ಮಕ್ಕಳಿಗೆ ಅರ್ಥವಾಗಿದೆ. ವಿದ್ಯಾರ್ಥಿಗಳಿಗೆ ಇರುವ ಸಮಸ್ಯೆ ಬಗ್ಗೆ ಇವತ್ತು ರಿವ್ಯೂ ಮೀಟಿಂಗ್ ಮಾಡಿದ್ದೇವೆ. ಎಲ್ಲಾ ಜಿಲ್ಲೆಯ ಡಿಸಿ, ಸಿಇಓಗಳ ಜೊತೆ ಚರ್ಚೆ ಮಾಡಿದ್ದೇವೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಜಾಸ್ತಿ ಆಗಲಿದೆ. ಮಕ್ಕಳಿಗೆ ಒತ್ತಡ ಹಾಕಬಾರದು ಅಂತ ಸೂಚನೆ ನೀಡಿದ್ದೇನೆ. ಸಿಎಂ ಅವರು ಸಭೆಯಲ್ಲಿ ಗರಂ ಆಗಿದ್ರು. ಗ್ರೇಸ್ ಅಂಕ ಕೊಡಬಾರದಿತ್ತು ಅಂತ ಹೇಳಿದ್ರು. ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಅಂಕ ಕೊಡೋದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕದ ಬಗ್ಗೆ ಪರಿಶೀಲನೆ ಮಾಡ್ತೀವಿ. ಆದರೆ ನಾವು ಕಳೆದ ಬಾರಿ ವೆಬ್‌ಕಾಸ್ಟಿಂಗ್ ಹಿನ್ನೆಲೆಯಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕ ಈ ಬಾರಿ ಕೊಡೊಲ್ಲ ಎಂದು ಹೇಳಿದರು.

ಕಳೆದ ಬಾರಿ 10% ಗ್ರೇಸ್ ಅಂಕ ಶಿಕ್ಷಣ ಇಲಾಖೆ ಕೊಟ್ಟಿತ್ತು. ಕೋವಿಡ್ ಹಿನ್ನೆಲೆ ಮೊದಲೇ 10% ಗ್ರೇಸ್ ಅಂಕ ಇತ್ತು. ಅದರ ಜೊತೆಗೆ ಮತ್ತೆ 10% ಗ್ರೇಸ್ ಅಂಕ ಕೊಡಲಾಗಿತ್ತು. ಒಟ್ಟು 20% ಗ್ರೇಸ್ ಅಂಕ ಕೊಟ್ಟಿದ್ದು ಬಾರಿ ವಿವಾದ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದು ಮಾಡಿದ್ದೇವೆ ಎಂದು ತಿಳಿಸಿದರು.

ಮಕ್ಕಳು ಸ್ಮಾರ್ಟ್ ಕ್ಲಾಸ್ ಬೇಕು ಅಂತ ಕೇಳ್ತಿದ್ದಾರೆ. ಇಂಟರ್ನೆಟ್ ವ್ಯವಸ್ಥೆ ಬೇಕು ಅಂತ ವಿದ್ಯಾರ್ಥಿಗಳು ಕೇಳಿದ್ದಾರೆ. ಇದರ ವ್ಯವಸ್ಥೆ ಶಿಕ್ಷಣ ಇಲಾಖೆ ಮಾಡಲಿದೆ. ಸ್ಕಿಲ್ ವಿಷಯಗಳನ್ನು ಕಲಿಸುವ ಕಾರ್ಯಕ್ರಮ ಶೀಘ್ರವೇ ಪ್ರಾರಂಭ ಮಾಡಲಿದ್ದೇವೆ ಎಂದರು.

ಅನಧಿಕೃತ ಶಾಲೆಗಳ ಪಟ್ಟಿ ಆಗ್ತಿದೆ. ಅಂತಿಮ ಮಾಡ್ತಿದ್ದೇವೆ. ಶಾಲೆ ಮಾನ್ಯತೆ ನವೀಕರಣ ವಿಚಾರದಲ್ಲಿ ನಿಯಮಗಳ ಸಡಿಲದ ಬಗ್ಗೆ ಚರ್ಚೆ ಮಾಡ್ತಿದ್ದೇವೆ. ಕಟ್ಟಡ ಕನ್ವರ್ಷನ್, ನವೀಕರಣ, ಅಗ್ನಿಶಾಮಕ ಸೇರಿ ಇರುವ ಗೊಂದಲ ನಿವಾರಣೆಗೆ ಸೂಚನೆ ನೀಡಿದ್ದೇನೆ. ನಮ್ಮ ಶಾಲೆ ಜಮೀನಿನಲ್ಲಿ ಮನೆ ಕಟ್ಟುಕೊಂಡಿದ್ದರೆ ಏನ್ ಮಾಡಬೇಕು ಅಂತ ಚರ್ಚೆ ಆಗ್ತಿದೆ. ಅನಧಿಕೃತ ಶಾಲೆ ವಿಚಾರದಲ್ಲಿ ಏಕಾಏಕಿ ನಿರ್ಧಾರ ಮಾಡಿದ್ರೆ ಮಕ್ಕಳ ಮೇಲೆ ಪರಿಣಾಮ ಆಗುತ್ತದೆ. ದೊಡ್ಡ ದೊಡ್ಡ ಶಾಲೆಗಳೇ ತಪ್ಪು ಮಾಡಿವೆ. ಅವುಗಳನ್ನು ಸರಿ ಮಾಡೋ ಕೆಲಸ ಮಾಡ್ತಿದ್ದೇವೆ ಎಂದು ತಿಳಿಸಿದರು.

ಎಕ್ಸಾಂಗೆ ಹಿಜಬ್ ಅನುಮತಿ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಷಯ ಕೋರ್ಟ್‌ನಲ್ಲಿದೆ. ಈ ಬಗ್ಗೆ ಮಾತಾಡೊಲ್ಲ. ಅನುಮತಿ ಕೊಡುವ ಬಗ್ಗೆ ಗೃಹ ಸಚಿವರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡ್ತೀವಿ ಎಂದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!