ಹೊಸದಿಗಂತ ಡಿಜಿಟಲ್ ಡೆಸ್ಕ್
ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ. ಯಾಕೆಂದರೆ ನಾನು ಸತ್ಯವನ್ನೇ ಹೇಳಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೇಳಿದ್ದಾರೆ.
ಮಂಗಳೂರು ಬಾಂಬ್ ಸ್ಫೋಟದ ಆರೋಪಿಯನ್ನು ತಕ್ಷಣವೇ ಉಗ್ರ ಎಂದು ಘೋಷಿಸಿದ್ದನ್ನು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದರು. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆಯೇ ಡಿ.ಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.
ಉಗ್ರಗಾಮಿ ಚಟುವಟಿಕೆಯಿಂದ ನಾವು ನಮ್ಮ ನಾಯಕರನ್ನೇ ಕಳೆದುಕೊಂಡಿದ್ದೇವೆ. ಬಾಂಬ್ ಸ್ಫೋಟದ ಕಾರಣಕ್ಕಾಗಿ ಮುಖ್ಯಮಂತ್ರಿಗಳು ಹುದ್ದೆಯನ್ನೇ ಕಳೆದುಕೊಂಡಿದ್ದಾರೆ ಎಂದು ಹೇಳುವ ಮೂಲಕ ಉಗ್ರವಾದದ ವಿಚಾರ ತಮಗೂ ಗೊತ್ತಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಬಯಲಾದ ವೋಟರ್ ಐಡಿ ಹಗರಣದ ದಿಕ್ಕು ತಪ್ಪಿಸಾಲು ಅಧಿಕಾರಿಗಳನ್ನು ಬಳಸಿಕೊಂಡು ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಮತ್ತೆ ಹೇಳಿದ್ದಾರೆ.