ಹೊಸದಿಗಂತ ವರದಿ ಹುಬ್ಬಳ್ಳಿ:
ಭ್ರಷ್ಟಾಚಾರ, ಆಡಳಿತ ವಿಫಲತೆ ಮರೆಮಾಚುವ ಸಲುವಾಗಿ ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಎಬ್ಬಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಯಾರು ಕಾಂಗ್ರೆಸ್ ಸೇರುತ್ತಿಲ್ಲ. ಈಗಾಗಲೇ ಈ ವಿಚಾರವಾಗಿ ರಾಜ್ಯಾಧ್ಯಕ್ಷರ ಜೊತೆಗೆ ನಾನು ಮಾತನಾಡಿದ್ದು, ಅವರು ಸಹ ಸ್ಪಷ್ಟ ಪಡಿಸಿದ್ದಾರೆ ಎಂದರು.
ಕಾವೇರಿ ವಿಚಾರದಲ್ಲಿ ವಿಫಲತೆ, ಭ್ರಷ್ಟಾಚಾರ ಹಾಗೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿರುವ ಕಾರಣ ಕಾಂಗ್ರೆಸ್ ನವರು ಸುಳ್ಳು ಹೇಳಿ ವಿಷಯಾತಂರ ಮಾಡುತ್ತಿದ್ದಾರೆ ಎಂದು ತಿಳಿಸಿದರು.