ಗಣರಾಜ್ಯೋತ್ಸವದಲ್ಲಿ ಚುನಾವಣಾ ಪ್ರಚಾರಕ್ಕೆ ಅವಕಾಶ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದಲ್ಲಿ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದಾಗಿ ಗಣರಾಜ್ಯೋತ್ಸವ ಆಚರಣೆ ವೇಳೆ ಯಾವುದೇ ರಾಜಕೀಯ ಪ್ರಚಾರ ನಡೆಯುವಂತಿಲ್ಲ ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ ಹೇಳಿದೆ.

ಗಣರಾಜ್ಯೋತ್ಸವ ಆಚರಣೆ ವೇಳೆ ರಾಜಕೀಯ ಪಕ್ಷಗಳು ಮತ್ತು ನೇತಾರರು ಯಾವುದೇ ರೀತಿ ಪ್ರಚಾರ ಮಾಡಬಾರದು. ವೇದಿಕೆಯನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. ಆಚರಣೆ ವೇಳೆ ಸಾಂಸ್ಕೃತಿಕ ಸಭೆ, ಕಾರ್ಯಕ್ರಮ ನಡೆಸಲು ಆಯೋಗ ಯಾವುದೇ ನಿರ್ಬಂಧ ವಿಧಿಸಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!