ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವ ಚುನಾವಣೆಯಲ್ಲೂ ಸ್ಪರ್ಧೆ ಮಾಡೋದಿಲ್ಲ, ಜನ ರೆಸ್ಟ್ ಕೊಟ್ಟಿದಾರೆ, ತಗೋತಿದಿನಿ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಚನ್ನಪಟ್ಟಣ ಸ್ಪರ್ಧೆ ವಿಚಾರ ನನ್ನ ಮುಂದೆ ಚರ್ಚೆಯಲ್ಲಿ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್, ಸಿಎಂ ಹಾಗೂ ಡಿಸಿಎಂ ತೀರ್ಮಾನ ಮಾಡ್ತಾರೆ. ಸೂಕ್ತ ಅಭ್ಯರ್ಥಿಯನ್ನ ನಮ್ಮ ಪಕ್ಷ ಕಣಕ್ಕಿಳಿಸುತ್ತೆ. ನಾನೂ ಕೂಡಾ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡ್ತೇನೆ ಎಂದಿದ್ದಾರೆ.
ಶಾಸಕರು ರಾಜೀನಾಮೆ ಕೊಟ್ಟು ಒಂದು ವಾರ ಆಗಿದೆ. ಇನ್ನೂ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿಲ್ಲ. ಡಿಸಿಎಂ ಡಿಕೆಶಿ ಅವರು ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನಹರಿಸಿದ್ದಾರೆ ಎಂದು ತಿಳಿಸಿದ್ದಾರೆ.