ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅವರೇ ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ, ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ನಿಮಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಶನಿವಾರ ಹೇಳಿದೆ.
ಸಿಎಂ ಸ್ಥಾನವನ್ನು ಡಿಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಮನವಿ ಮಾಡಿದ ಬೆನ್ನಲ್ಲೇ ವ್ಯಕ್ತಿಯೊಬ್ಬರೊಂದಿಗೆ ಸಿದ್ದರಾಮಯ್ಯ ಅವರು ನಡೆಸಿರುವ ಮಾತುಕತೆ ವೀಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ಆಡಿರುವ ಮಾತುಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಯಾವ ಸ್ವಾಮೀಜಿನೂ ಸಿಎಂ ಸ್ಥಾನದ ಬಗ್ಗೆ ಡಿಸೈಡ್ ಮಾಡೋಕೆ ಆಗೋದಿಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದರು.