ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ಸವಾರರಿಗಿಲ್ಲ ಪ್ರವೇಶ-ಡಿಸಿ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಲೆ ಮಹಾದೇಶ್ವರನ ಮಹಾಲಯ ಅಮಾವಾಸ್ಯೆ ಜಾತ್ರೆ ಶುರುವಾಗಿದ್ದು, ಭಕ್ತರ ಭದ್ರತೆಯ ದೃಷ್ಟಿಯಿಂದಾಗಿ ದ್ವಿಚಕ್ರ ವಾಹನಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರದ ಹನೂರು ತಾಲೂಕಿನಲ್ಲಿರುವ ಮಾದಪ್ಪನ ಬೆಟ್ಟಕ್ಕೆ ಮಹಾಲಯ ಅಮಾವಾಸ್ಯೆ ಹಿನ್ನೆಲೆ, ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಜಾತ್ರೆ ಇರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಾರೆ. ಬೆಟ್ಟ ತಲುಪಲು ಕಡಿದಾದ ರಸ್ತೆ, ತಿರುವುಗಳಿರುವುದರಿಂದ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ದ್ವಿಚಕ್ರ ವಾಹನಗಳ ಪ್ರವೇಶವನ್ನು ತಡೆ ಹಿಡಿಯಲಾಗಿದೆ.

ಇಂದಿನಿಂದ ಮೂರು ದಿನಗಳ ಕಾಲ, ಅಕ್ಟೋಬರ್‌ 15ರವರೆಗೆ ದ್ವಿಚಕ್ರ ವಾಹನಗಳಿಗೆ ಅನುಮತಿ ನೀಡದಂತೆ ಡಿಸಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!