ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಚಿವೆ ಅತಿಶಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೆಹಲಿಗೆ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ಭೋಗಲ್ನಲ್ಲಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅವರನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಉಪವಾಸದ ನಾಲ್ಕನೇ ದಿನವಾದ ಸೋಮವಾರ ಆಸ್ಪತ್ರೆ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ, ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕಂಡ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದಾರೆ, ಆದರೂ ಅವರು ನಿರಾಕರಿಸಿದ್ದರು.
ಸೋಮವಾರ ರಾತ್ರಿ ಅವರ ರಕ್ತದಲ್ಲಿರುವ ಸಕ್ಕರೆ ಪ್ರಮಾಣ 43ಕ್ಕೆ ಕುಸಿದಿತ್ತು, ಮಂಗಳವಾರ ಬೆಳಗಿನ ಜಾವ 36ಕ್ಕೆ ಕುಸಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಐದು ದಿನಗಳಿಂದ ಅವರು ಏನನ್ನೂ ತಿಂದಿಲ್ಲ, ಹರ್ಯಾಣದಿಂದ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜೂನ್ 21ರಿಂದ ಅತಿಶಿ ತೂಕ ಇಳಿಕೆಯಾಗುತ್ತಿದ್ದು, ನಾಲ್ಕು ದಿನಗಳಲ್ಲಿ 2.2 ಕೆಜಿ ತೂಕ ಇಳಿಕೆಯಾಗಿದೆ.