ವಿಶ್ವಾಸ ದ್ರೋಹ ಮಾಡಿದವರನ್ನು ಕ್ಷಮಿಸೋ ಮಾತೇ ಇಲ್ಲ: ಬಿಎಸ್‌ವೈ

ಹೊಸದಿಗಂತ ವರದಿ ಹುಬ್ಬಳ್ಳಿ:

ಹಿಂದೆ ನಾನು ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ. ಈ ಬಗ್ಗೆ ರಾಜ್ಯದ ಜನರನ್ನು ಕ್ಷಮೆಯಾಚಿಸಿದ್ದೇನೆ. ಜಗದೀಶ ಶೆಟ್ಟರ ಅವರ ಹಾಗೇ ಕಾಂಗ್ರೆಸ್ ಗೆ ಸೇರಿಲ್ಲ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದರು.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ ಅವರನ್ನು ಸೋಲಿಸುವಲ್ಲಿ ಖಂಡಿತ ಯಶಸ್ವಿಯಾಗುತ್ತೇವೆ. ವಿಶ್ವಸ ದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಶೆಟ್ಟರ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದರು.

ಶೆಟ್ಟರ್ ಬಿಜೆಪಿಗೆ ವಾಪಸ್ ಬರುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ‌ ಉತ್ತರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!