2022ರ ಬಜೆಟ್‌ ಯಾರಿಗೂ ಲಾಭ ತಂದುಕೊಟ್ಟಿಲ್ಲ: ಕಾಂಗ್ರೆಸ್‌ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಣಕಾಸು ಸಚಿವಾಲಯದ ಈ ವರ್ಷದ ಬಜೆಟ್‌ ನಿಂದ ಮಧ್ಯಮ ವರ್ಷಗದ ಜನರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗು ಪ್ರಧಾನಿ ಮೋದಿ ಮಧ್ಯಮ ವರ್ಗದ ಜನರಿಗೆ ದ್ರೋಹ ಮಾಡಿದ್ದಾರೆ ಎಂದಿದೆ.
ಈ ಬಗ್ಗೆ ಟ್ವೀಟ್‌ ಮಾಡಿದ ಕಾಂಗ್ರೆಸ್‌ ನ ಪ್ರಧಾನ ಕಾರ್ಯದರ್ಶಿ, ಮುಖ್ಯ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಕೋವಿಡ್‌ ನಂತರ ಎಲ್ಲಾ ವಲಯಗಳು ಪರಿಹಾರಕ್ಕಾಗಿ ಆಶಿಸುತ್ತಿದ್ದವು ಆದರೆ ಆ ಎಲ್ಲಾ ಮಧ್ಯಮ ವರ್ಗದವರಿಗೆ ಈ ಬಜೆಟ್‌ ನಿರಾಸೆ ತಂದಿದೆ ಎಂದಿದ್ದಾರೆ.
ಯುವಕರಿಗೆ, ಸಣ್ಣ ಉದ್ಯಮಿದಾರರಿಗೆ, ಕೃಷಿಕರಿಗೆ, ಮಧ್ಯಮ ವರ್ಗದವರಿಗೆ, ಬಡವರಿಗೆ ಈ ಬಜೆಟ್‌ 2022 ಏನೂ ತಂದುಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!