ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ತನ್ನ ನಾಗರಿಕರನ್ನು ಹಾಗೂ ರಾಜತಾಂತ್ರಿಕ ಸಿಬ್ಬಂದಿಯನ್ನು ತಕ್ಷಣಕ್ಕೆ ಸ್ಥಳಾಂತರಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ, ಎಲ್ಲಕ್ಕಿಂತ ಹೆಚ್ಚಾಗಿ ತನ್ನ ಪ್ರಜೆಗಳ ಸುರಕ್ಷತೆ ಬಗ್ಗೆ ಗಮನ ಹರಿಸಲಾಗಿದೆ ಎಂದು ಭಾರತ ಹೇಳಿದೆ.
ಉಕ್ರೇನ್ ಬಿಕ್ಕಟ್ಟಿನ ಕುರಿತು ರಷ್ಯಾ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ನಿರಂತರ ರಾಜತಾಂತ್ರಿಕ ಮಾತುಕತೆ ಮೂಲಕ ಉದ್ವಿಗ್ನತೆ ತಗ್ಗಿಸಲು ಮತ್ತು ಪರಿಸ್ಥಿತಿ ನಿಭಾಯಿಸಲು ಬೇಕಾದ ಬೆಂಬಲ ಭಾರತ ನೀಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಕೈವ್ನಲ್ಲಿರುವ ಭಾರತೀಯ ಕಚೇರಿಯು ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಭಾರತೀಯರನ್ನು ಅಥವಾ ರಾಜತಾಂತ್ರಿಕ ಸಿಬ್ಬಂದಿಯನ್ನು ತಕ್ಷಣಕ್ಕೆ ಸ್ಥಳಾಂತರಿಸುವ ಯೋಜನೆ ಇಲ್ಲ ಎಂದು ಹೇಳಿದ್ದಾರೆ.