ಎಷ್ಟು ಜಾಗ್ರತೆ ವಹಿಸಿದರೂ ಸಾಲದು, ದೊಡ್ಡಬಳ್ಳಾಪುರದಲ್ಲಿ ಹಾವು ಕಚ್ಚಿ ಕಂದಮ್ಮ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೋಷಕರ ಗಮನ ಸದಾ ಮಕ್ಕಳ ಮೇಲೆಯೇ ಇರುತ್ತದೆ. ಅವರಿಗೆ ಕಿಂಚಿತ್ತೂ ನೋವಾಗದಂತೆ ಜಾಗ್ರತೆ ವಹಿಸುತ್ತಾರೆ. ಒಂದು ಕ್ಷಣದಲ್ಲಿ ಅಪಾಯ ನಡೆದುಹೋಗುತ್ತದೆ, ಅಲ್ವಾ?

ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ  ತಾಲ್ಲೂಕಿನ ‌ಕೋಳೂರು ಗ್ರಾಮದಲ್ಲಿ ಅಹಿತಕರ ಘಟನೆ ನಡೆದಿದೆ. ಟಿ ಹೊಸಹಳ್ಳಿ ಗ್ರಾಮದ ಅನುಷಾ (7) ಹಾವಿನಿಂದ ಕಚ್ಚಿಸಿಕೊಂಡು ಮೃತಪಟ್ಟಿದ್ದಾಳೆ. ಇನ್ನು ಕೋಳೂರು ಗ್ರಾಮದ ತೋಟದ ಮನೆಯಲ್ಲಿ ಈ ಕುಟುಂಬ ಕೂಲಿ ಕೆಲಸ ಮಾಡಿಕೊಂಡಿತ್ತು. ಎಂದಿನಂತೆ ತಂದೆ-ತಾಯಿ‌ ತೋಟದಲ್ಲಿ ಕೇಲಸ ಮಾಡುವ ವೇಳೆ ಆಟವಾಡುತ್ತಿದ್ದ ಮಗುವಿಗೆ ಹಾವು ಕಚ್ಚಿದೆ.

ಈ ವೇಳೆ ಮಗು ಅಸ್ವಸ್ಥಗೊಂಡಿದ್ದನ್ನ ಕಂಡ ಕುಟುಂಬಸ್ಥರು ಕೂಡಲೇ ದೊಡ್ಡಬಳ್ಳಾಪುರ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!