ಕೇಂದ್ರಕ್ಕೆ ಎಷ್ಟೇ ಮನವಿ ಮಾಡಿದರೂ ಒಂದು ರೂಪಾಯಿ ಸಿಕ್ಕಿಲ್ಲ: ಸಚಿವ ಸಂತೋಷ್ ಲಾಡ್

ಹೊಸದಿಗಂತ ವರದಿ ಹುಬ್ಬಳ್ಳಿ:

ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದಾರೆ. ಅನುದಾನ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿದರೂ ಸಹ ಒಂದು ರೂಪಾಯಿ ಸಹ ನೀಡಿಲ್ಲ. ಕಳೆದ 10 ವರ್ಷದಿಂದ ರಾಜ್ಯಕ್ಕೆ ಕೇಂದ್ರದಿಂದ ಯಾವುದೇ ವಿಶೇಷ ಅನುದಾನ ಬಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತ‌ನಾಡಿದ ಅವರು, ಹಿಂದೆ ರಾಜ್ಯಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ಅನುದಾನ ಬಾರದಿರುವುದು ದುರದೃಷ್ಟ ಸಂಗತಿ ಎಂದರು. ರಾಜ್ಯದಿಂದ ಸಂಗ್ರಹವಾದ ಜಿಎಸ್ ಟಿ ಹಾಗೂ ಸೇಸ್ ಹಣ ವನ್ನು ಉತ್ತರ ಭಾರತ ರಾಜ್ಯಗಳ ಅಭಿವೃದ್ಧಿ ಮಾಡಿದ್ದಾರೆ ಎಂದು ಆರೋಪಿಸಿದರು.

ಕಳೆದ 10 ವರ್ಷದಿಂದ ಬಿಜೆಪಿ ಕ್ರಿಯಾಶೀಲವಾಗಿ ಅಪರೇಶನ್ ಮಾಡಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳು ಇದಕ್ಕೆ ಉದಾಹರಣೆಯಾಗಿದೆ. ಬಿಜೆಪಿ ಅವರ ಮಾಡಿರುವುದು ಇಡೀ ದೇಶದ ಜನರು ನೋಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!