ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಷ್ಟೇ ಸಮಸ್ಯೆ ಇದ್ದರೂ, ಕಷ್ಟ ಇದ್ದರೂ ನಾವೇ ನಿಮ್ಮ ಸಹಾಯಕ್ಕೆ ಬರಬೇಕೆ ಹೊರತು ದೆಹಲಿಯಿಂದ ಯಾರೂ ನೆರವಿಗೆ ಬರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಹೋದರ ಡಿ.ಕೆ.ಸುರೇಶ್ ಪರವಾಗಿ ಇಂದು ಮತ ಬೇಟೆಗೆ ಇಳಿದಿರುವ ಡಿಕೆಶಿ, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳ ಜೊತೆ ಸಭೆ ನಡೆಸಿದ್ದಾರೆ.
ಈ ವೇಳೆ ಮತದಾರರ ಭೇಟಿಗೆ ಅಂತ ಬಂದಿದ್ದೇನೆ. ನಿಮ್ಮ ಸಮಸ್ಯೆ ಕಷ್ಟ ಏನೇ ಇದ್ದರು ಸಹಾಯಕ್ಕೆ ಬರುವುದು ನಾವೇ. ದೆಹಲಿಯಿಂದ ಯಾರೂ ಬರಲ್ಲ ಎಂದರು.
ನಾನು ಮೇಕೆದಾಟು ಪಾದಯಾತ್ರೆ ಮಾಡಿದಾಗ ಬಿರಿಯಾನಿ ಕೊಟ್ಕೊಂಡು ಹೋಗ್ತಿದ್ದಾರೆ ಅಂತ ನಗುತ್ತಿದ್ದರು. ಎಷ್ಟು ನಡೆದಿದ್ದೇನೆ ಎಷ್ಟು ಹೋರಾಟ ಮಾಡಿದ್ದೇನೆ ಯಾರಿಗೋಸ್ಕರ ಮಾಡಿದ್ದೇನೆ? ರಾಜ್ಯದ ಜನತೆಗಾಗಿ ಎಂದು ಹೇಳಿದರು.