ಅಮಿತ್‌ ಶಾ, ಮೋದಿ ಯಾರೇ ಬರಲಿ ನಮ್ಮ ರಾಜ್ಯದ ಮತದಾರರ ಮನಸ್ಸು ಗೆಲ್ಲೋಕಾಗಲ್ಲ: ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ನಮ್ಮ ರಾಜ್ಯಕ್ಕೆ ಅಮಿತ್ ಶಾ, ಜೆ.ಪಿ. ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಮಿತ್ ಶಾ  ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರು, ಕರ್ನಾಟಕಕ್ಕೆ ಬರ ಪರಿಹಾರ ಹಣ ನೀಡಿದ್ದಾರೆಯೇ? ಅದನ್ನು ಕೊಡದೇ ಇಲ್ಲಿಗೇ ಬಂದು ಮತ ನೀಡಿ ಎಂದು ಕೇಳೋದಕ್ಕೆ ಯಾವ ನೈತಿಕ ಹಕ್ಕಿದೆ? ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಹೈಕಮಾಂಡ್ ಬಳಿ ಕರ್ನಾಟಕಕ್ಕೆ ಬರ ಪರಿಹಾರ ಕೊಡಿ ಎಂದು ಕೇಳಬೇಕಲ್ಲವೇ, ಮೇಕೆದಾಟುಗೆ ಅನುಮತಿ ಕೊಟ್ಟಿದ್ದಾರೆಯೇ, ಮಹದಾಯಿಗೆ ಪರಿಸರ ಇಲಾಖೆಯಿಂದ ಅನುಮತಿ ನೀಡಿದ್ದಾರೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿದ್ದಾರೆಯೇ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ಪರಿಹಾರ ಕೊಟ್ಟಿದ್ದಾರೆಯೇ ಎಂದು ಸರಣಿ ಪ್ರಶ್ನೆಗಳನ್ನು ಸಿಎಂ ಕೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!