ಸಿದ್ದರಾಮಯ್ಯ ಜೊತೆ ಒಳಒಪ್ಪಂದ ಮಾಡಿಕೊಳ್ಳೋ ಅಗತ್ಯ ಬಿಎಸ್‌ವೈಗೆ ಇಲ್ಲ: ವಿಜಯೇಂದ್ರ

ಹೊಸದಿಗಂತ ವರದಿ ಮೈಸೂರು:

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ನಡುವೆ ಯಾವುದೇ ಒಳ ಒಪ್ಪಂದ ನಡೆದಿಲ್ಲ ಅಂತಹ ಯಾವುದೇ ಒಪ್ಪಂದವನ್ನು ಮಾಡಿಕೊಳ್ಳುವ ಅಗತ್ಯತೆ ಯಡಿಯೂರಪ್ಪರಿಗೆ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.

ಶನಿವಾರ ಮೈಸೂರಿನ ಚಾಮರಾಜಪುರಂನ ವಾಣಿವಿಲಾಸ ರಸ್ತೆಯಲ್ಲಿ ರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರುಣ ಹಾಗೂ ಶಿಕಾರಿಪುರ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಆಂತರಿಕ ಒಪ್ಪಂದ ನಡೆದಿಲ್ಲ ಯಡಿಯೂರಪ್ಪನವರೇ ಒಂದು ಮಹಾ ಶಕ್ತಿ ಅಗ್ರಗಣ್ಯ ನಾಯಕ ಹಾಗಾಗಿ ಅವರು ಬೇರೆ ಯಾರೊಂದಿಗೂ ಒಳ ಒಪ್ಪಂದ ಮಾಡಿಕೊಳ್ಳುವ ಅಗತ್ಯತೆನೇ ಇಲ್ಲ ಇಡೀ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸುವ ಶಕ್ತಿ ಅವರಿಗೆ ಇದೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟವೇ ಶಿವಮೊಗ್ಗಕ್ಕೆ ಬಂದು ಕೂತು, ಚುನಾವಣೆಯಲ್ಲಿ ಪ್ರಚಾರ ಮಾಡಿದರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ . ಅಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಗೆಲುವು ಸಾಧಿಸಿದರು. ಈಗ ದಿವಾಳಿ ಪರಿಸ್ಥಿತಿಯಲ್ಲಿರುವ ಕಾಂಗ್ರೆಸ್ ನೊಂದಿಗೆ ಒಪ್ಪಂದ ಮಾಡಿಕೊಳ್ಳುವ ಅಗತ್ಯ ಏನಿದೆ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!